ಬಸವಣ್ಣ   
  ವಚನ - 434     
 
ನೀನಿಕ್ಕಿದ ಬೀಯದಲ್ಲಿ ವಂಚನೆಯುಳ್ಳರೆ ಸಂಗಾ, ನಿಮ್ಮ ತೊತ್ತುತನಕ್ಕೆ ದೂರವಯ್ಯಾ! ಕದ್ದು ತಿಂದರೆ ಕೈಹಿಡಿದೊಮ್ಮೆ ಬಡಿದು ತುಡುಗುಣಿತನವ ಬಿಡಿಸಯ್ಯಾ! ಜಂಗಮ ಮನೆಗೆ ಬಂದಲ್ಲಿ ಓಸರಿಸಿದರೆ ಹಿಡಿದು ಮೂಗ ಕೊಯಿಯಯ್ಯಾ! ಕೂಡಲಸಂಗಮದೇವಾ.