ಬಸವಣ್ಣ   
  ವಚನ - 492     
 
ವಚನದಲ್ಲಿ ನಾಮಾಮೃತ ತುಂಬಿ, ನಯನದಲ್ಲಿ ಮೂರುತಿ ತುಂಬಿ, ಮನದಲ್ಲಿ ನಿಮ್ಮ ನೆನಹು ತುಂಬಿ, ಕಿವಿಯಲ್ಲಿ ಕೀರುತಿ ತುಂಬಿ, ಕೂಡಲಸಂಗಮದೇವಾ, ನಿಮ್ಮ ಚರಣಕಮಲದಲಾನು ತುಂಬಿ!