ಬಸವಣ್ಣ   
  ವಚನ - 540     
 
ಆರು ಕೋಟಿ ಬ್ರಹ್ಮರು ಮಡಿವಲ್ಲಿ ನಾರಾಯಣಗೆ ಒಂದು ದಿನವಾಯ್ತು. ನಾರಾಯಣರೊಂದು ಕೋಟಿ ಮಡಿವಲ್ಲಿ ರುದ್ರನ ಕಣ್ಣೆವೆ ಹಳಚಿತ್ತು. ರುದ್ರಾವತಾರ ಹಲವಳಿದಲ್ಲಿ ನಮ್ಮ ಕೂಡಲಸಂಗಮದೇವನೇನೆಂದೂ ಅರಿಯನು.