ಬಸವಣ್ಣ   
  ವಚನ - 545     
 
ಅಮೃತಮತಿ ಸೋಮಶಂಭುವಿಂಗೆ ಹುಟ್ಟಿದಾತ ಇಂದ್ರ; ಸತ್ಯಋಷಿ ಜ್ಯೇಷ್ಠಾದೇವಿಗೆ ಹುಟ್ಟಿದಾತ ಬ್ರಹ್ಮ; ವಸುದೇವ ದೇವಕಿಗೆ ಹುಟ್ಟಿದಾತ ವಿಷ್ಣು; ನಾಭಿರಾಜ ಮರುತಾದೇವಿಗೆ ಹುಟ್ಟಿದಾತನರುಹ, ಇವರೆಲ್ಲರೂ ಯೋನಿಜರೆಂಬುದ ತ್ರೈಜಗ ಬಲ್ಲುದು. ಉತ್ಪತ್ತಿ ಸ್ಥಿತಿ ಪ್ರಳಯಕ್ಕೆ ಹೊರಗಾದ ಕೂಡಲಸಂಗಮದೇವಂಗೆ ಮಾತಾಪಿತರುಳ್ಳರೆ ಹೇಳಿರೋ!