ಬಸವಣ್ಣ   
  ವಚನ - 547     
 
ಹುಟ್ಟಿಸುವಾತ ಬ್ರಹ್ಮನೆಂಬರು, ರಕ್ಷಿಸುವಾತ ವಿಷ್ಣುವೆಂಬರು, ನೋಡಾ ಬ್ರಹ್ಮ ತನ್ನ ಶಿರವನ್ನೇಕೆ ಹುಟ್ಟಿಸಲಾರ? ವಿಷ್ಣು ತನ್ನ ಮಗನನ್ನೇಕೆ ರಕ್ಷಿಸಲಾರ? ದುಷ್ಟನಿಗ್ರಹ ಶಿಷ್ಟಪರಿಪಾಲಕ ನಮ್ಮ ಕೂಡಲಸಂಗಮದೇವ.