ಬಸವಣ್ಣ   
  ವಚನ - 557     
 
ಅರಗು ತಿಂದು ಕರಗುವ ದೈವವ, ಉರಿಯ ಕಂಡರೆ ಮುರುಟುವ ದೈವವನೆಂತು ಸರಿಯೆಂಬೆನೆಯ್ಯಾ? ಅವಸರ ಬಂದರೆ ಮಾರುವ ದೈವವನೆಂತು ಸರಿಯೆಂಬೆನೆಯ್ಯಾ? ಅಂಜಿಕೆಯಾದರೆ ಹೂಳುವ ದೈವವನೆಂತು ಸರಿಯೆಂಬೆನೆಯ್ಯಾ? ಸಹಜಭಾವ ನಿಜೈಕ್ಯ ಕೂಡಲಸಂಗಮದೇವನೊಬ್ಬನೇ ದೇವ.