ಬಸವಣ್ಣ   
  ವಚನ - 559     
 
ಉಣಲುಡಲು ಮಾರಿಯಲ್ಲದೆ, ಕೊಲಲು ಕಾಯಲು ಮಾರಿಯೇ? ತನ್ನ ಮಗನ ಜವನೊಯ್ದಲ್ಲಿ ಅದೆತ್ತ ಹೋದಳಾ ಮಾರಿಕವ್ವೆ? ಈವ ಕಾವರೆ ನಮ್ಮ ಕೂಡಲಸಂಗಯ್ಯನಲ್ಲದೆ ಮತ್ತೊಂದು ದೈವವಿಲ್ಲಾ.