ಬಸವಣ್ಣ   
  ವಚನ - 571     
 
ಆದಿ ಪುರಾಣ ಅಸುರರಿಗೆ ಮಾರಿ, ವೇದ ಪುರಾಣ ಹೋತಿಂಗೆ ಮಾರಿ, ರಾಮ ಪುರಾಣ ರಕ್ಕಸರಿಗೆ ಮಾರಿ, ಭಾರತ ಪುರಾಣ ಗೋತ್ರಕ್ಕೆ ಮಾರಿ. ಎಲ್ಲಾ ಪುರಾಣ ಕರ್ಮಕ್ಕೆ ಮೊದಲು: ನಿಮ್ಮ ಪುರಾಣಕ್ಕೆ ಪ್ರತಿಯಿಲ್ಲಾ ಕೂಡಲಸಂಗಮದೇವಾ.