ಬಸವಣ್ಣ   
  ವಚನ - 574     
 
ದಕ್ಷಯಾಗವ ನಡೆಸಲೆಂದು ಅಜಮುಖ್ಯರಾದ ಸುರರೆಲ್ಲಾ ನೆರದು ಬಂದ ಬಾಯ ನೋಡಾ, ಬಾಯ ತಪ್ಪಿಸಿ ಉಣಬಂದ ದೈವದ ಬೆಂದ ಬಾಯ ನೋಡಾ! ಉಣ್ಣದೆ ಉಡದೆ ಹೊಗೆಯ ಕೈಯಲಿ ಸತ್ತ ಅಣ್ಣಗಳ ಕೇಡ ನೋಡಾ, ಕೂಡಲಸಂಗಮದೇವಾ!