ಬಸವಣ್ಣ   
  ವಚನ - 576     
 
ಹೊಲೆಯೊಳಗೆ ಹುಟ್ಟಿ ಕುಲವನರಸುವ, ಎಲವೋ, ಮಾತಂಗಿಯ ಮಗ ನೀನು! ಸತ್ತುದನೆಳೆವನೆತ್ತಣ ಹೊಲೆಯ? ಹೊತ್ತು ತಂದು ನೀವು ಕೊಲುವಿರಿ. ಶಾಸ್ತ್ರವೆಂಬುದು ಹೋತಿಂಗೆ ಮಾರಿ, ವೇದವೆಂಬುದು ನಿಮಗೆ ತಿಳಿಯದು. ನಮ್ಮ ಕೂಡಲಸಂಗನ ಶರಣರು ಕರ್ಮವಿರಹಿತರು, ಶರಣಸನ್ನಿಹಿತರು, ಅನುಪಮಚರಿತ್ರರು: ಅವರಿಗೆ ತೋರಲು ಪ್ರತಿಯಿಲ್ಲವೋ!