ಬಸವಣ್ಣ   
  ವಚನ - 612     
 
ವೇದಶಾಸ್ತ್ರದವರ ಹಿರಿಯರೆನ್ನೆ; ಮಾಯಾಭ್ರಾಂತಿ ಕವಿದ ಗೀತಜ್ಞರ ಹಿರಿಯರೆನ್ನೆ! ಇವರು ಹಿರಿಯರುಗಳೇ? ಯಾಗನಟ್ಟುವಿಗಪಾಣರು! ಇವರಿಂದಧಿಕವ ಸಾಧಿಸುವರೇನು ಕಿರಿಯರೆ? ಇಂತು ವಿದ್ಯೆ ಗುಣ ಜ್ಞಾನ ಧರ್ಮ ಆಚಾರ ಶೀಲಂಗಳ, ನಮ್ಮ ಕೂಡಲಸಂಗನ ಶರಣರು ಸಾಧಿಸಿದ ಸಾಧನೆಯನೇ ಸಾಧಿಸುವುದು.