ಬಸವಣ್ಣ   
  ವಚನ - 624     
 
ವಿಪ್ರರ ಕರೆದು 'ನೃಪರುಗಳು ಇಪ್ಪರೆ ತಮ್ಮ ಶಿಶುವಿನೊಡನೆಂ'ದು ಬೆಸಗೊಂಡರೆ, "ಇಪ್ಪರು, ಇಪ್ಪರು, ತಾವು ಬಿತ್ತಿದ ಫಲಂಗಳ ತಾವು ಉಣ್ಣದವರುಂಟೆ?" ಎಂದು ಕಣ್ಣು ಕಾಣದೆ ಹೇಳಿದರು, ಅಣ್ಣಗಳು, ಕರ್ಮದ ಬಟ್ಟೆಯನು! ಅಂತೆಂದ ಮಾತ ಶಿಶು ಕೇಳಿ, ಕೆಟ್ಟೋಡಿ ಬಂದು ಲಿಂಗದ ಹೊಟ್ಟೆಯ ಹೋಗಲು, ಅಟ್ಟಿ ಬಂದು ಖಂಡೆಯವ ಕಳೆದುಕೊಂಡು ಮಂಡೆಯನೊಡೆಯಲು, ಮಂಡೆಯೊಡೆದು ಭೂಮಂಡಲವರಿಯೆ ನಾಲ್ಕು ಪುರವಾಗಲು, ಘಟಸರ್ಪನ ತುಡುಕಿ ನಾಗನಾಥನಾಗಿ, ಇಪ್ಪತ್ತೇಳು ಬಸತಿಯನೊಡೆಯನೆ? ಆಗಳಂತೆ, ಎನ್ನ ಮಾಡಿದ ಕರ್ಮ ನಿಮ್ಮ ಕೈಯಲು ಕೆಡಿಸುವರು. ಮುನ್ನೊಬ್ಬ ಕೆಡಿಸಿಹೆನೆಂದು ಬಂದು ಒಂದು ತುತ್ತನಿಟ್ಟು ಮರಳಿ ಕೈಯಿಡ ಹೋದರೆ ತುತ್ತು ಹುಳುಗುಪ್ಪೆಯಾಗದೆ? ಶಿವಧರ್ಮವ ಕೆಡಿಸಿದವನು ಅಧರ್ಮಕ್ಕಿಳಿವನು! ಕೂಡಲಸಂಗಮದೇವ ಸಾಕ್ಷಿಯಾಗಿ ಮಕರಭೋನವಾಗನೆ ವಿನಾಶಕ್ತಿರಾಯನು?