ಬಸವಣ್ಣ   
  ವಚನ - 625     
 
ಅರಸು ವಿಚಾರ ಸಿರಿಯು, ಶೃಂಗಾರ, ಸ್ಥಿರವಲ್ಲ ಮಾನವಾ: ಕೆಟ್ಟಿತ್ತು ಕಲ್ಯಾಣ, ಹಾಳಾಯಿತ್ತು, ನೋಡಾ! ಒಬ್ಬ ಜಂಗಮದಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು, ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ!