ಬಸವಣ್ಣ   
  ವಚನ - 631     
 
ಆಯುಧವಿಕ್ಕಿದವಂಗೆ ವೀರದ ಮಾತೇಕೆ? ಲಿಂಗವನಂತರಿಸಿದವಂಗೆ ಒಳನುಡಿ ಏಕೆ? ಅಯಿದೆ-ಅಣಚಿಯಿಲ್ಲದವಳಿಗೆ ಸೌಭಾಗ್ಯದ ಹೂವಿನ ಬೊಟ್ಟೇಕೆ? ಸತ್ಯನಲ್ಲದವಂಗೆ ನಿತ್ಯನೇಮವೇಕೆ? ಕರ್ತಾರ, ನಿಮ್ಮ ಒಲವಿಲ್ಲದವಂಗೆ ಶಂಭುವಿನ ಬಂಧುಗಳೇಕೆ? ಕೂಡಲಸಂಗಮದೇವಯ್ಯಾ, ನೀವಿಲ್ಲದವಂಗೆ ಶಿವಾಚಾರದ ಮಾತೇಕೆ?