ಬಸವಣ್ಣ   
  ವಚನ - 637     
 
ಕೆಂಚ ಕರಿಕನ ನೆನೆದರೆ ಕರಿಕನಾಗಬಲ್ಲನೆ? ಕರಿಕ ಕೆಂಚನ ನೆನೆದರೆ ಕೆಂಚನಾಗಬಲ್ಲನೆ? ದರಿದ್ರ ಸಿರಿವಂತನ ನೆನೆದರೆ ಸಿರಿವಂತನಾಗಬಲ್ಲನೆ? ಸಿರಿವಂತ ದರಿದ್ರನ ನೆನೆದರೆ ದರಿದ್ರನಾಗಬಲ್ಲನೆ? ಮುನ್ನಿನ ಪುರಾತರ ನೆನೆದು ಧನ್ಯನಾದೆಹೆನೆಂಬ ಮಾತಿನ ರಂಜಕರನೇನೆಂಬೆ, ಕೂಡಲಸಂಗಮದೇವಾ?