ಬಸವಣ್ಣ   
  ವಚನ - 639     
 
ಇಂದ್ರಿಯ ನಿಗ್ರಹವ ಮಾಡಿದರೆ ಹೊಂದುವುವು ದೋಷಂಗಳು: ಮುಂದೆ ಬಂದು ಕಾಡುವುವು ಪಂಚೇಂದ್ರಿಯಂಗಳು. ಸತಿಪತಿರತಿಸುಖವ ಬಿಟ್ಟರೆ ಸಿರಿಯಾಳ-ಚಂಗಳೆಯವರು? ಸತಿಪತಿರತಿಸುಖಭೋಗೋಪಭೋಗವಿಳಾಸವ ಬಿಟ್ಟ(ನೆ) ಸಿಂಧುಬಲ್ಲಾಳನು? ನಿಮ್ಮ ಮುಟ್ಟಿ ಪರಧನ-ಪರಸತಿಯರಿಗೆಳಸಿದರೆ ನಿಮ್ಮ ಚರಣಕ್ಕೆ ದೂರ, ಕೂಡಲಸಂಗಮದೇವಾ!