ಬಸವಣ್ಣ   
  ವಚನ - 641     
 
ಒಡೆಯರು ತಮ್ಮ ಮನೆಗೆ ಒಡಗೊಂಡು ಹೋದರೆ, ತುಡುಗುಣಿತನದಲ್ಲಿ ಪರವಧುವ ನೋಡುವ ಸರಸ ಬೇಡ, ಕಾಣಿರಣ್ಣಾ ! ಒಡೆಯನರಸಿಯ ಸರಸ ಬೇಡ! ಕೂಳ ಸೊಕ್ಕು ತಲೆಗೇರಿ ರಾಣಿವಾಸದೊಡನೆ ಸರಸ ಬೇಡ; ಕೂಡಲಸಂಗಮದೇವ ಕರ ಸಿತಗನಯ್ಯಾ!