ಬಸವಣ್ಣ   
  ವಚನ - 646     
 
ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ ತಪ್ಪಿದರೆ ಹಿಡಿದಿರ್ದ ಲಿಂಗವು ಘಟಸರ್ಪನಂತೆ! ನುಡಿಯಲು ಬಾರದು, ನಡೆಯಲು ಬಾರದು, ಲಿಂಗದೇವನೆ ದಿಬ್ಯವೊ, ಅಯ್ಯಾ! ಬಡವನ ಕೋಪ ಅವುಡಿಗೆ ಮೃತ್ಯುವಾದಂತೆ ಕಡೆದಾಂಟದು, ಕಾಣಾ, ಕೂಡಲಸಂಗಮದೇವಾ.