ಬಸವಣ್ಣ   
  ವಚನ - 653     
 
ತಂದೆ ಮಕ್ಕಳಿಗೆ ಬುದ್ಧಿಯ ಹೇಳುವಲ್ಲಿ ತಪ್ಪಿಂಗೆ ಮುನಿವನಲ್ಲದೆ ಪ್ರಾಣಕ್ಕೆ ಮುನಿಯ. ಲಿಂಗವಂತನು ಲಿಂಗವಂತರಿಗೆ ಬುದ್ಧಿಯ ಹೇಳುವಲ್ಲಿ ಅವಗುಣಕ್ಕೆ ಮುನಿವನಲ್ಲದೆ ಲಾಂಛನಕ್ಕೆ ಮುನಿಯ. ಲಿಂಗಭಕ್ತನು ಲಿಂಗಪಥವ ಹೇಳಿದರೆ ಮಚ್ಚರಿಸುವರ ಮೆಚ್ಚ ಕೂಡಲಸಂಗಮದೇವ.