ಬಸವಣ್ಣ   
  ವಚನ - 660     
 
ಅಡಿಗಡಿಗೆ ದೇವರಾಣೆ, ಅಡಿಗಡಿಗೆ ಭಕ್ತರಾಣೆ, ಅಡಿಗಡಿಗೆ ಗುರುವಿನಾಣೆ ಎಂಬ ವಚನವೇ ಹೊಲ್ಲ! ಮುಂದೆ ಶಿವಪಥಕ್ಕೆ ಸಲ್ಲರು. ಆದಿಯಿಂದ ಬಂದ ವಚನವೆಂದು ಶರಣರ ಕೂಡೆ ಸರಸವಾಡಿದರೆ- ನಗುತಲಿರಿದುಕೊಂಡರೆ ಅಲಗು ನೆಡದಿಹುದೆ, ಕೂಡಲಸಂಗಮದೇವಾ?