ಬಸವಣ್ಣ   
  ವಚನ - 666     
 
ಹುಲಿಯ ಹಾಲು ಹುಲಿಗಲ್ಲದೆ ಹೊಲದ ಹುಲ್ಲೆಗೆ ಉಣಿಸಬಾರದು; ಕಲಿಯ ಕಾಲ ತೊಡರು ಛಲದಾಳಿಗಲ್ಲದೆ ಇಕ್ಕಬಾರದು; ಅಳಿಮನದಾಸೆಯವರ ಮೂಗ ಹಲುದೋರ ಕೊಯ್ವ ಕೂಡಲಸಂಗಮದೇವ.