ಬಸವಣ್ಣ   
  ವಚನ - 691     
 
ಮನಕ್ಕೆ ಮನ ಒಂದಾಗಿ, ಧನಕ್ಕೆ ಧನ ಒಂದಾಗಿ ನಚ್ಚಿದ ಮಚ್ಚು ಅಚ್ಚೊತ್ತಿದಂತಿರಬೇಕು. ಪ್ರಾಣಕ್ಕೆ ಪ್ರಾಣ ಒಂದಾಗಿ, ಶುಭಸೂಚನೆಯೊಂದಾಗಿರದ ನಚ್ಚು ಮಚ್ಚು ಪಾರವೈದುವುದೆ? ಶಿರ ಹರಿದರೇನು, ಕರುಳು ಕುಪ್ಪಳಿಸಿದರೇನು? ಇಂತಪ್ಪ ಸಮಸ್ತವಸ್ತುವೆಲ್ಲವೂ ಹೋದರೇನು? ಚಿತ್ತ ಮನ ಬುದ್ಧಿ ಒಂದಾದ ಮಚ್ಚು, ಬಿಚ್ಚಿ ಬೇರಾಗದಿದ್ದರೆ ಮೆಚ್ಚುವ ನಮ್ಮ ಕೂಡಲಸಂಗಮದೇವ.