ಬಸವಣ್ಣ   
  ವಚನ - 697     
 
ನಾಳೆ ಬಪ್ಪುದು ನಮಗಿಂದೆ ಬರಲಿ; ಇಂದು ಬಪ್ಪುದು ನಮಗೀಗಲೆ ಬರಲಿ; ಇದಕಾರಂಜುವರು, ಇದಕಾರಳುಕುವರು? "ಜಾತಸ್ಯ ಮರಣಂ ಧ್ರುವಂ" ಎಂಬುದಾಗಿ, ನಮ್ಮ ಕೂಡಲಸಂಗಮದೇವರು ಬರೆದ ಬರೆಹವ ತಪ್ಪಿಸುವರೆ ಹರಿಬ್ರಹ್ಮಾದಿಗಳಿಗಳವಲ್ಲಾ!