ಬಸವಣ್ಣ   
  ವಚನ - 711     
 
ದೇವ, ದೇವಾ ಬಿನ್ನಪವನವಧಾರು: ವಿಪ್ರ ಮೊದಲು, ಅಂತ್ಯಜ ಕಡೆಯಾಗಿ ಶಿವಭಕ್ತರಾದವರನೆಲ್ಲರನೊಂದೇ ಎಂಬೆ: ಹಾರುವ ಮೊದಲು ಶ್ವಪಚ ಕಡೆಯಾಗಿ ಭವಿಯಾದವರನೊಂದೇ ಎಂಬೆ; ಈ ಹೀಗೆಂದು ನಂಬುವುದೆನ್ನ ಮನವು: ಈ ನುಡಿದ ನುಡಿಯೊಳಗೆ ಎಳ್ಳ ಮೊನೆಯಷ್ಟು ಸಂದೇಹವುಳ್ಳರೆ, ಹಲುದೋರೆ ಮೂಗ ಕೊಯಿ, ಕೂಡಲಸಂಗಮದೇವಾ.