ಬಸವಣ್ಣ   
  ವಚನ - 722     
 
ತನುವ ಬಂದಲೆವರಯ್ಯಾ ಎನ್ನ, ಮನವ ಬಂದು ನೋಡುವರಯ್ಯಾ , ಎನ್ನ ಧನವ ಬಂದು ಸೂರೆಗೊಂಬರಯ್ಯಾ ಜಂಗಮವನವರತ! ಕೂಡಲಸಂಗಮದೇವಾ, ನಿಮ್ಮ ಬಯ್ಕೆಯ ಭಂಡಾರಕ್ಕೆ ನಾನು ಶುದ್ಧನಯ್ಯಾ.