ಬಸವಣ್ಣ   
  ವಚನ - 725     
 
ಬಾಲಾಭ್ಯಾಸವ ಮಾಡಹೋದರೆ ಎನ್ನ ಸುರಿಗೆ ಎನ್ನನಟ್ಟಿತ್ತು: ಎಂತಯ್ಯಾ ಕಲಿಯೊಡನೆ ಶ್ರವವ ಮಾಡುವೆನು? ರಾಯ ರಾಜಗುರು ಜಗದ ಬಿನ್ನಾಣಿಯ ತೊಡಕ ಬಿಡಿಸಬಾರದು: ಸರಿಸದ ಮೇಲೆ ಹಿಡಿಯ ಹೋದರೆ ಚದುರಂಗದ ಮೇಲೆ ಮಸಿಯ ತೋರಿದ ಕೂಡಲಸಂಗಮದೇವ.