ಬಸವಣ್ಣ   
  ವಚನ - 741     
 
ಸಿರಿಯಾಳನ ಮಗನ ಬಾಣಸವ ಮಾಡಿಸಿ ಉಣಲೊಲ್ಲದೆ ಕಾಡಿದೆ, ಚೋಳನ ಮನೆಯಲ್ಲುಣಲೊಲ್ಲದೆ, ಚೆನ್ನನ ಮನೆಯಲುಂಡೆ: ಒಬ್ಬರಿಗೊಂದು ಪರಿಯ ಮಾಡಿದೆ, ಕೂಡಲಸಂಗಮದೇವಾ!