ಬಸವಣ್ಣ   
  ವಚನ - 746     
 
ನಿಷ್ಠೆಯಿಂದ ಲಿಂಗವ ಪೂಜಿಸಿ ಮತ್ತೊಂದು ಪಥವನರಿಯದ ಶರಣರು ಸರ್ಪನ ಹೆಡೆಯ ಮಾಣಿಕದಂತಿಪ್ಪರು, ಭೂಷಣರಾಗಿ ! ದರ್ಪಣದೊಳಗಣ ಪ್ರತಿಬಿಂಬದಂತೆ ಹಿಂಗದಿಪ್ಪರು, ಕೂಡಲಸಂಗಮದೇವಾ, ನಿಮ್ಮ ಶರಣರು.