ಬಸವಣ್ಣ   
  ವಚನ - 750     
 
ವೇದ ನಡನಡುಗಿತ್ತು, ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದಿತ್ತಯ್ಯಾ ! ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತ್ತಯ್ಯಾ : ಆಗಮ ಹೆರತೊಲಗಿ ಅಗಲಿ ಇದ್ದಿತ್ತಯ್ಯಾ , ನಮ್ಮ ಕೂಡಲಸಂಗಯ್ಯನು ಚೆನ್ನಯ್ಯನ ಮನೆಯಲುಂಡ ಕಾರಣ!