ಬಸವಣ್ಣ   
  ವಚನ - 756     
 
ಹೋಗಬಿಟ್ಟು, ಮರಳಿ ಹಿಂದ ನೋಡಿ, ಮತ್ತಾಗಬೇಕೆಂಬ ಸಂದೇಹವುಳ್ಳನ್ನಕ್ಕ ಅದೆ ಪಾರದ್ವಾರ ನಾಯಕನರಕ, ತಪ್ಪದು! ಅನ್ಯವಧುವೆಂಬುದು ನಿಮ್ಮ ರಾಣಿವಾಸ: ಇದೇ ದಿಬ್ಯ, ಕೂಡಲಸಂಗಮದೇವಾ.