ಬಸವಣ್ಣ   
  ವಚನ - 764     
 
ಕಲಿಯ ಕೈಯ ಕೈದುವಿನಂತಿರಬೇಕು, ಅಯ್ಯಾ; ಎಲುದೋರ ಸರಸವಾಡಿದರೆ ಸೈರಿಸಬೇಕಯ್ಯಾ. ರಣದಲ್ಲಿ ತಲೆ ಹರಿದು ಅಟ್ಟೆ ನೆಲಕ್ಕೆ ಬಿದ್ದು ಬೊಬ್ಬಿಡಲದಕ್ಕೆ ಒಲಿವ ಕೂಡಲಸಂಗಮದೇವ.