ಬಸವಣ್ಣ   
  ವಚನ - 772     
 
ಹುತ್ತದ ಮೇಲಣ ರಜ್ಜು ಮುಟ್ಟಿದರೆಯೂ ಸಾವರು ಶಂಕಿತರಾದವರು. ಸರ್ಪದಷ್ಟವಾದರೆಯೂ ಸಾಯರು ನಿಶ್ಯಂಕಿತರಾದವರು: ಕೂಡಲಸಂಗಮದೇವಯ್ಯಾ, ಶಂಕಿತಂಗೆ ಪ್ರಸಾದ ಸಿಂಗಿ ಕಾಳಕೂಟ ವಿಷವು!