ಬಸವಣ್ಣ   
  ವಚನ - 774     
 
ಪಂಡಿತನಾಗಲಿ, ಮೂರ್ಖನಾಗಲಿ ಸಂಚಿತಕರ್ಮ, ಉಂಡಲ್ಲದೆ ಬಿಡದು, ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದೆಂದು ಶ್ರುತಿ ಸಾರುತ್ತೈದಾವೆ, ನೋಡಾ, ತಾನಾವ ಲೋಕದೊಳಗಿದ್ದರೆಯೂ ಬಿಡದು. ಕರ್ಮಫಲಗೂಡಿ ಕೂಡಲಸಂಗಮದೇವಂಗೆ ಆತ್ಮನೈವೇದ್ಯವ ಮಾಡಿದವನೆ ಧನ್ಯ.