ಬಸವಣ್ಣ   
  ವಚನ - 785     
 
ಒಡಲ ಕಳವಳಕ್ಕೆ, ಬಾಯ ಸವಿಗೆ ಬಯಸಿ ಉಂಡೆನಾದರೆ ನಿಮ್ಮ ತೊತ್ತಿನ ಮಗನಲ್ಲಾ! ಬೇಡೆ, ಬೇಡೆ, ನಿಮ್ಮ ನಂಬಿದ ಸದ್ಭಕ್ತರ: ಅವರೊಕ್ಕುದ ಉಂಬೆ, ಅವರೆಂದಂತೆ ಎಂಬೆ. ಎನ್ನೊಡೆಯ ಕೂಡಲಸಂಗಮದೇವನೊಲ್ಲದವರ ಹಿಡಿದೆನಾದಡೆ ನಿಮ್ಮ ಪಾದದಾಣೆ!