ಬಸವಣ್ಣ   
  ವಚನ - 813     
 
ಸರ್ಪನ ಸಂಯೋಗ, ಜ್ಯೋತಿಯ ಪತಂಗನ ಬೆಸನದಂತೆ- ಮನದ ಮದವರಿಯದೆ ನಿಮ್ಮ ಕೃಪೆಯಿಂದೆ ನಿಮ್ಮ ನೆನೆವೆ. ಎನ್ನ ಭಾವದ ಕೊನೆಯ-ಮೊನೆಯ ಮೇಲೆ ಮನೆಯ ಮಾಡಿಕೊಂಡಿಪ್ಪೆಯಯ್ಯಾ, ಕೂಡಲಸಂಗಮದೇವಾ, ನೀನೆನ್ನ ಪ್ರಾಣನಾಥನಾಗಿ.