ಬಸವಣ್ಣ   
  ವಚನ - 814     
 
ಪೃಥಿವಿಯಪ್ಪು, ತೇಜ, ವಾಯುವಾಕಾಶ ನಿರಂಜನದೇವಾ, ನಿಮ್ಮ ಮಹಿಮೆಯ ಪ್ರಣವಸ್ವರೂಪಂಗಲ್ಲದೆ ಕಾಣಲಾರಿಗೆಯೂ ಬಾರದಯ್ಯಾ. ಜ್ಞಾನಜ್ಯೋತಿ ಧ್ಯಾನದಿಂದ ನಾಳಶುದ್ಧ ದ್ವಾರನಾಗಿ ಆರಾಧಿಸಿ ಕಂಡೆ, ನಮ್ಮ ಕೂಡಲಸಂಗಮದೇವನ.