ಬಸವಣ್ಣ   
  ವಚನ - 828     
 
ಹಸಿವು, ತೃಷೆ, ನಿದ್ರೆ, ವಿಷಯಂಗಳ ಮರೆದೆ: ನೀವು ಕಾರಣ, ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಂಗಳ ಮರೆದೆ: ನೀವು ಕಾರಣ. ಪಂಚೇಂದ್ರಿಯ, ಸಪ್ತಧಾತು, ಅಷ್ಟಮದಂಗಳ ಮರೆದೆ, ನೀವು ಕಾರಣ. ಕೂಡಲಸಂಗಮದೇವಯ್ಯಾ, ನಿಮ್ಮ ಶರಣರಿಗೆ ಆಪ್ಯಾಯನವಾದರೆ ಎನಗೆ ತೃಪ್ತಿಯಾಯಿತ್ತು!