ಬಸವಣ್ಣ   
  ವಚನ - 829     
 
ತನು ನಿಮ್ಮದೆಂದ ಬಳಿಕ ಎನಗೆ ಬೇರೆ ತನುವಿಲ್ಲ; ಮನ ನಿಮ್ಮದೆಂದ ಬಳಿಕ ಎನಗೆ ಬೇರೆ ಮನವಿಲ್ಲ; ಧನ ನಿಮ್ಮದೆಂದ ಬಳಿಕ ಎನಗೆ ಬೇರೆ ಧನವಿಲ್ಲ. ಇಂತೀ ತ್ರಿವಿಧವೂ ನಿಮ್ಮದೆಂದರಿದ ಬಳಿಕ ಎನಗೆ ಬೇರೆ ವಿಚಾರವುಂಟೆ, ಕೂಡಲಸಂಗಮದೇವಾ?