ಬಸವಣ್ಣ   
  ವಚನ - 842     
 
ಜ್ಞಾನದ ಬಲದಿಂದ ಅಜ್ಞಾನದ ಕೇಡ ನೋಡಯ್ಯಾ; ಜ್ಯೋತಿಯ ಬಲದಿಂದ ತಮಂಧದ ಕೇಡ ನೋಡಯ್ಯಾ; ಸತ್ಯದ ಬಲದಿಂದ ಅಸತ್ಯದ ಕೇಡ ನೋಡಯ್ಯಾ: ಪರುಷದ ಬಲದಿಂದ ಅವಲೋಹದ ಕೇಡ ನೋಡಯ್ಯಾ! ಕೂಡಲಸಂಗನ ಶರಣರ ಅನುಭಾವದಿಂದ ಎನ್ನ ಮನದ ಕೇಡ ನೋಡಯ್ಯಾ!