ಬಸವಣ್ಣ   
  ವಚನ - 852     
 
ಕಾಯವೆಂಬ ಘಟಕ್ಕೆ ಚೈತನ್ಯವೆ ಸಯಿದಾನ, ಸಮತೆಯೆಂಬ ಜಲ, ಕರಣಾದಿಗಳೆ ಶ್ರವಣ; ಜ್ಞಾನವೆಂಬಗ್ನಿಯನಿಕ್ಕಿ, ಮತಿಯೆಂಬ ಸಟ್ಟುಗದಲ್ಲಿ ಘಟ್ಟಿಸಿ ಪಾಕಕ್ಕೆ ತಂದು, ಭಾವದಲ್ಲಿ ಕುಳ್ಳಿರಿಸಿ ಪರಿಣಾಮದೋಗರವ ನೀಡಿದರೆ ಕೂಡಲಸಂಗಮದೇವಂಗೆ ಆರೋಗಣೆಯಾಯಿತ್ತು.