ಬಸವಣ್ಣ   
  ವಚನ - 853     
 
ಕಣ್ಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ, ಕೈಗಳು ತುಂಬಿದ ಬಳಿಕ ಪೂಜಿಸಲಿಲ್ಲ, ಮನ ತುಂಬಿದ ಬಳಿಕ ನೆನೆಯಲಿಲ್ಲ, ಮಹಂತ ಕೂಡಲಸಂಗಮದೇವನ!