ಬಸವಣ್ಣ   
  ವಚನ - 869     
 
ಕುಲಮದವಳಿಯದನ್ನಕ್ಕ ಶರಣನಾಗಲೇಕೆ? ವಿಧಿವಶ ಬಿಡದನ್ನಕ್ಕ ಭಕ್ತನಾಗಲೇಕೆ? ಹಮ್ಮಿನ ಸೊಮ್ಮಿನ ಸಂಬಂಧ ಬಿಟ್ಟು ಕಿಂಕಿಲ ಕಿಂಕಿಲ ಕಿಂಕಿಲನಾಗಿರಬೇಕು! ಹೆಪ್ಪನೆರೆದ ಹಾಲು ಕೆಟ್ಟು ತುಪ್ಪವಪ್ಪಂತೆ ಇಪ್ಪರು, ಕೂಡಲಸಂಗಮದೇವಾ, ನಿಮ್ಮ ಶರಣರು!