ಬಸವಣ್ಣ   
  ವಚನ - 870     
 
ಮಣ್ಣ ಮಡಕೆ ಮಣ್ಣಾಗದು ಕ್ರೀಯಳಿದು; ಬೆಣ್ಣೆ ಕರಗಿ ತುಪ್ಪವಾಗಿ ಮರಳಿ ತುಪ್ಪ ಬೆಣ್ಣೆಯಾಗದು ಕ್ರೀಯಳಿದು; ಹೊನ್ನು ಕಬ್ಬುನವಾಗದು ಕ್ರೀಯಳಿದು, ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರೀಯಳಿದು: ಕೂಡಲಸಂಗನ ಶರಣನಾಗಿ ಮರಳಿ ಮಾನವನಾಗನು ಕ್ರೀಯಳಿದು.