ಬಸವಣ್ಣ   
  ವಚನ - 882     
 
ಅಯ್ಯಾ, ಸಜ್ಜನ ಸದ್ಭಾವರ ಸಂಗದಿಂದ ಮಹಾನುಭಾವರ ಕಾಣಬಹುದಯ್ಯಾ; ಮಹಾನುಭಾವರ ಸಂಗದಿಂದ ಶ್ರೀಗುರುವನರಿಯಬಹುದು, ಲಿಂಗವನರಿಯಬಹುದು, ಜಂಗಮವನರಿಯಬಹುದು, ಪ್ರಸಾದವನರಿಯಬಹುದು, ತನ್ನ ತಾನರಿಯಬಹುದು. ಇದು ಕಾರಣ, ಸದ್ಭಕ್ತರ ಸಂಗವನೆ ಕರುಣಿಸು, ಕೂಡಲಸಂಗಮದೇವಾ, ನಿಮ್ಮ ಧರ್ಮ!