ಬಸವಣ್ಣ   
  ವಚನ - 894     
 
ಬಸವ ಬಾರೈ, ಮರ್ತ್ಯಲೋಕದೊಳಗೆ ಭಕ್ತರುಂಟೆ? ಹೇಳಯ್ಯಾ: ಮತ್ತಾರೂ ಇಲ್ಲಯ್ಯಾ, ಮತ್ತಾರೂ ಇಲ್ಲಯ್ಯಾ, ಮತ್ತಾರೂ ಇಲ್ಲಯ್ಯಾ! ನಾನೊಬ್ಬನೆ ಭಕ್ತನು, ಮರ್ತ್ಯಲೋಕದೊಳಗಣ ಭಕ್ತರೆಲ್ಲರೂ ಜಂಗಮಲಿಂಗ, ನೀನೆ ಅಯ್ಯಾ! ಕೂಡಲಸಂಗಮದೇವಾ.