ಬಸವಣ್ಣ   
  ವಚನ - 898     
 
ಕುಲಗೆಟ್ಟರೆ ಕೆಡಬಹುದಲ್ಲದೆ ಛಲಗೆಡಬಾರದು; ಛಲಗೆಟ್ಟರೆ ಕೆಡಬಹುದಲ್ಲದೆ ಭಕ್ತಿಯ ಅನು ಕೆಡಬಾರದು, ಭಕ್ತಿಯ ಅನು ಕೆಟ್ಟರೆ ಕೆಡಬಹುದಲ್ಲದೆ ಆಯತ ಕೆಡಬಾರದು; ಆಯತ ಕೆಟ್ಟರೆ ಕೆಡಬಹುದಲ್ಲದೆ ಸ್ವಾಯತ ಕೆಡಬಾರದಯ್ಯಾ! ಎಲೆ ಕೂಡಲಸಂಗಮದೇವಯ್ಯಾ, ಮುನ್ನ ಮುಟ್ಟಿತ್ತೆ ಮುಟ್ಟಿತ್ತು: ಇನ್ನು ಮುಟ್ಟಿದೆನಾದರೆ ನಿಮ್ಮ ರಾಣಿವಾಸದಾಣೆ!