ಬಸವಣ್ಣ   
  ವಚನ - 902     
 
ಈ ಲೋಕದ ಭೀತರು, ಆ ಲೋಕದ ಕಲಿಗಳು. ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯರೆಲ್ಲರೂ ಅಜಾತಂಗೆ ಸರಿಯೆ? ಮೂಜಗದಲ್ಲಿ ನಿರತರು ಕೂಡಲಸಂಗನ ಶರಣರು ತ್ರಿವಿಧವನರಿಯರು.