ಬಸವಣ್ಣ   
  ವಚನ - 912     
 
ಮನೆಯ ಗಂಡನ ಮನೆವಾರ್ತೆಯನೇನ ಹೇಳುವೆನವ್ವಾ ! ಅಂಗವಿದ್ಯೆಯನೊಲ್ಲ; ಕಣ್ಗಳೊಳಗಣ ಕಸವ ಕಳೆದಲ್ಲದೆ ನೋಡಲೀಯ; ಕೈಯ ತೊಳೆದಲ್ಲದೆ ಮುಟ್ಟಲೀಯ; ಕಾಲ ತೊಳೆದಲ್ಲದೆ ಹೊದ್ದಲೀಯ! ಇಂತೀ ಸರ್ವಾಂಗ ತಲೆದೊಳೆದ ಕಾರಣ, ಕೂಡಲಸಂಗಮದೇವನೆನ್ನ ಕೂಡಿಕೊಂಡನವ್ವಾ!