ಬಸವಣ್ಣ   
  ವಚನ - 915     
 
ಸಿನೆ ಬಂಜೆಯರಿಗೊಬ್ಬ ಮಗ ಹುಟ್ಟಿ, ಅವನೆನ್ನ ರಿಣಕ್ಕೆ ಒಡೆಯನಾದ, ಅವನೆನ್ನ ಧನಕ್ಕೆ ಒಡೆಯನಾದ, ಆನು ಗಳಿಸಿದ ಒಮ್ಮನಕ್ಕೆ ಅಗಲದೆ ಮೋಹಿತನಾದ. ಕೂಡಲಸಂಗಮದೇವನಂತಪ್ಪ ಮಗ ಹುಟ್ಟಿರೆ, ಇದ್ದನಯ್ಯಾ ಕಾಯ ಮಾತೆಯಾಗಿ, ಜೀವ ಪಿತನಾಗಿ ನಾನಿರಿಸಿದಂತೆ!