ಬಸವಣ್ಣ   
  ವಚನ - 924     
 
ದೇವಲೋಕ ಮರ್ತ್ಯಲೋಕವೆಂಬ ಸೀಮೆಯುಳ್ಳನ್ನಕ್ಕ ಕೇವಲ ಶರಣನಾಗಲರಿಯೆ. ಸತ್ತು ಬೆರಸಿಹೆನೆಂದರೆ ಕಬ್ಬಿನ ತುದಿಯ ಮೆಲಿದಂತೆ! ಕೂಡಲಸಂಗಮದೇವಾ.